Thought for the day

One of the toughest things in life is to make things simple:

8 Dec 2018

Reported Crimes


ªÀgÀ¢AiÀiÁzÀ ¥ÀæPÀgÀtUÀ¼À ªÀiÁ»w:
ಮಟ್ಕಾ ದಾಳಿ ಪ್ರಕರಣದ ಮಾಹಿತಿ.
ದಿನಾಂಕ: 07/12/2018 ರಂದು ರಾತ್ರಿ 10-20 ಗಂಟೆಯ ಅವಧಿಯಲ್ಲಿ ಆರೋಪಿಯಾದ ಪಂಪಣ್ಣ ತಂದೆ ಆದಪ್ಪ @ ಅದಣ್ಣ  ಕುರ್ಡಿನು ಬಾಗಲವಾಡ ಗ್ರಾಮದ ಹಿರೇ ಹಣಗಿ- ಬಾಗಲವಾಡ ಮುಖ್ಯ ಸಾರ್ವಜನಿಕ ರಸ್ತೆಯಲ್ಲಿ ನಿಂತುಕೊಂಡು ಒಂದು ರೂ ಗೆ 80/-ರೂ ಕೊಡುವುದಾಗಿ ಅಂತಾ ಕೂಗಾಡುತ್ತಾ ಇದ್ದಾಗ ಪಂಚರ ಸಮಕ್ಷಮದಲ್ಲಿ ಶ್ರೀಅಮರೇಶ ಎಎಸ್‌‌ & ಸಿಬ್ಬಂದಿಯವರು ದಾಳಿ ಮಾಡಿ ಸಿಕ್ಕಿ ಬಿದ್ದ ಆರೋಫಿತನ ವಶದಿಂದ 1).ಮಟಕಾ ನಂಬರ್ ಬರೆದ ಪಟ್ಟಿ .ಕಿ ಇಲ್ಲ  2) ನಗದು ಹಣ.1510/- ರೂ 3)ಒಂದು ಬಾಲ್ ಪೆನ್ನು .ಕಿ.ಇಲ್ಲ ಇವುಗಳನ್ನು ಜಪ್ತಿ ಪಡಿಸಿಕೊಂಡು ಸಿಕ್ಕಿ ಬಿದ್ದವನು ತಾನು ಬರೆದುಕೊಂಡು ಮಟಕಾ ಪಟ್ಟಿಯನ್ನು ತಾನೇ ಇಟ್ಟುಕೊಳ್ಳುವದಾಗಿ ತಿಳಿಸಿದ್ದು ಇರುತ್ತದೆ. ಸಿಕ್ಕಿ ಬಿದ್ದ ಆರೋಪಿತನನ್ನು ವಶಕ್ಕೆ ಪಡೆದುಕೊಂಡು ಮುದ್ದೇಮಾಲು, ಪಂಚನಾಮೆಯೊಂದಿಗೆ ಒಂದು ವರದಿಯನ್ನು ನೀಡಿ ಮುಂದಿನ ಕಾನೂನು ಕ್ರಮಕ್ಕಾಗಿ ಹಾಜರು ಪಡಿಸಿದ್ದರ ಮೇಲಿಂದ ಮಾನ್ಯ ಜೆಎಮ್ ಎಪ್ ಸಿ ನ್ಯಾಯಾಲಯ ಮಾನವಿ ರವರ ಪರವಾನಿಗೆಯನ್ನು ದಿನಾಂಕ- 08/12/2018 ರಂದು 10-20 ಗಂಟೆಗೆ ಪಡೆದುಕೊಂಡು ಠಾಣೆಗೆ ಬಂದು ಕವಿತಾಳ ಪೊಲೀಸ್‌‌ ಠಾಣೆಯ ಗುನ್ನೆ ನಂ:184/2018, ಕಲಂ:78[3] ಕೆ.ಪಿ.ಯಾಕ್ಟ ಪ್ರಕಾರ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡಿರುತ್ತಾರೆ.